July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

ಬೆಳ್ತಂಗಡಿ: ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲೆ ಘಟಕದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಸಭೆ ನ.9ರಂದು ಮಂಗಳೂರಿನ ಜಿಲ್ಲಾ ಕಾರ್ಯಾಲಯದಲ್ಲಿ ನೆರವೇರಿತು.

ಸಭೆಯನ್ನು ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಜಿಲ್ಲಾ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮುಂದಿನ ರಾಜ್ಯ ಅಧಿವೇಶನದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಿತು.

ಹಿರಿಯ ಮುಖಂಡರಾದ ವಿಶ್ವನಾಥ್ ಶೆಟ್ಟಿ ಅವರು ಕಾರ್ಯಕರ್ತರು ಸಂಘಟನೆಯ ಶಿಸ್ತು ಮತ್ತು ನಿಯಮಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ಅಗತ್ಯವನ್ನು ಒತ್ತಿಹೇಳಿ, ಕಾರ್ಮಿಕ ಇಲಾಖೆಯೊಂದಿಗೆ ಉತ್ತಮ ಸಹಕಾರದ ವಾತಾವರಣವನ್ನು ನಿರ್ಮಿಸುವ ಮಹತ್ವವನ್ನು ವಿವರಿಸಿದರು.

ಬಿ.ಎಂ.ಎಸ್. ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು ಅವರು ಡಿ.07 ರಂದು ಮಂಡ್ಯದ ಶ್ರಿರಂಗಪಟ್ಟಣದಲ್ಲಿ ನಡೆಯಲಿರುವ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ರಾಜ್ಯ ಅಧಿವೇಶನ ಕುರಿತು ಪ್ರಮುಖ ಮಾರ್ಗಸೂಚಿಗಳನ್ನು ನೀಡಿದರು. ರಾಜ್ಯ ಅಧಿವೇಶನದಲ್ಲಿ ಪ್ರತಿ ತಾಲೂಕಿನಿಂದ ಆಯ್ದ ಪದಾಧಿಕಾರಿಗಳು ಹಾಗೂ ಪ್ರಮುಖರು ಭಾಗವಹಿಸುವಂತೆ ಸೂಚಿಸಿ, ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಕರೆ ನೀಡಿದರು.


ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಉಜಿರೆ ಅವರು ಕಾರ್ಮಿಕರ ನೊಂದಣಿ ಪ್ರಕ್ರಿಯೆ ಮತ್ತು ಕಾರ್ಮಿಕ ಕಾರ್ಡ್ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಕಾರ್ಯದರ್ಶಿ ಗೋಪಾಲ ಕೃಷ್ಣ ಅವರು ಸಂಘಟನೆಯ ವಾರ್ಷಿಕ ವರದಿ ವಾಚಿಸಿದರು.

ಸಭೆಯ ಅಂತ್ಯದಲ್ಲಿ ರಾಜ್ಯ ಅಧಿವೇಶನದ ಸಿದ್ಧತೆಯ ಪ್ರಮುಖ ಜವಾಬ್ದಾರಿಯನ್ನು ಕುಮಾರ್ ನಾಥ್ ಉಜಿರೆ ಅವರಿಗೆ ವಹಿಸಲಾಯಿತು.
ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪದಾಧಿಕಾರಿಗಳು ಉತ್ಸಾಹಭರಿತವಾಗಿ ಭಾಗವಹಿಸಿ, ರಾಜ್ಯಾಧಿವೇಶನವನ್ನು ಯಶಸ್ವಿಯಾಗಿ ನಡೆಸುವ ಬದ್ಧತೆಯನ್ನು ವ್ಯಕ್ತಪಡಿಸಿದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!