ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಚರ್ಚ್ ತೊಡಂಬಿಲ, ಚರ್ಚ್‌ನ ಧರ್ಮಗುರುಗಳಾದ ವಂದನೀಯ ಅಂತೋನಿ ಲೋಬೊರವರ ಮಾರ್ಗದರ್ಶನದಲ್ಲಿ, ಕಾರ್ಮಿಕ, ಪರಿಸರ ಮತ್ತು ಅಂತರ್ಧರ್ಮೀಯ ಆಯೋಗಗಳ ಸಂಯುಕ್ತ ಪೋಷಕತ್ವದಲ್ಲಿ, “ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” ಎಂಬ ಪರಿಕಲ್ಪನೆಯಡಿ ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲಿನ ಅಸಹಾಯಕರಿಗೆ ಸುಮಾರು ರೂ. 2 ಲಕ್ಷ ಮೌಲ್ಯದ ನಿತ್ಯೋಪಯೋಗಿ ವಸ್ತುಗಳನ್ನು ಸಂಗ್ರಹಿಸಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ರವರಿಗೆ ಹಸ್ತಾಂತರಿಸಲಾಯಿತು.

ಈ ಉತ್ತಮ ಸೇವಾ ಚಟುವಟಿಕೆಯನ್ನು ಶ್ಲಾಘಿಸಿದ ಡಾ. ಯು.ಸಿ. ಪೌಲೋಸ್ ರವರು ಮಾತನಾಡಿ, “ ಅಸಹಾಯಕರಿಗೆ ಹೃದಯಗಳ ಬಾಂಧವ್ಯತೆ ನಿರ್ಮಿಸಲು ಇದು ದಾನಭಾವನೆಯ ಸುಂದರ ನಿದರ್ಶನ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿ ಸದಸ್ಯರು, ವಿವಿಧ ಆಯೋಗ ಸದಸ್ಯರು ಹಾಗೂ ಚರ್ಚ್‌ನ ಭಕ್ತಜನರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!