25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಚರ್ಚ್ ತೊಡಂಬಿಲ, ಚರ್ಚ್‌ನ ಧರ್ಮಗುರುಗಳಾದ ವಂದನೀಯ ಅಂತೋನಿ ಲೋಬೊರವರ ಮಾರ್ಗದರ್ಶನದಲ್ಲಿ, ಕಾರ್ಮಿಕ, ಪರಿಸರ ಮತ್ತು ಅಂತರ್ಧರ್ಮೀಯ ಆಯೋಗಗಳ ಸಂಯುಕ್ತ ಪೋಷಕತ್ವದಲ್ಲಿ, “ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” ಎಂಬ ಪರಿಕಲ್ಪನೆಯಡಿ ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲಿನ ಅಸಹಾಯಕರಿಗೆ ಸುಮಾರು ರೂ. 2 ಲಕ್ಷ ಮೌಲ್ಯದ ನಿತ್ಯೋಪಯೋಗಿ ವಸ್ತುಗಳನ್ನು ಸಂಗ್ರಹಿಸಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ರವರಿಗೆ ಹಸ್ತಾಂತರಿಸಲಾಯಿತು.

ಈ ಉತ್ತಮ ಸೇವಾ ಚಟುವಟಿಕೆಯನ್ನು ಶ್ಲಾಘಿಸಿದ ಡಾ. ಯು.ಸಿ. ಪೌಲೋಸ್ ರವರು ಮಾತನಾಡಿ, “ ಅಸಹಾಯಕರಿಗೆ ಹೃದಯಗಳ ಬಾಂಧವ್ಯತೆ ನಿರ್ಮಿಸಲು ಇದು ದಾನಭಾವನೆಯ ಸುಂದರ ನಿದರ್ಶನ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿ ಸದಸ್ಯರು, ವಿವಿಧ ಆಯೋಗ ಸದಸ್ಯರು ಹಾಗೂ ಚರ್ಚ್‌ನ ಭಕ್ತಜನರು ಉಪಸ್ಥಿತರಿದ್ದರು.

Related posts

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya
error: Content is protected !!