September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

ಬೆಳ್ತಂಗಡಿ: ಉಪ್ಪಿನಂಗಡಿ,‌ ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು ತಾಲೂಕಿನ ಮುಸ್ಲಿಂ ಒಕ್ಕೂಟದ ವತಿಯಿಂದ ಮುಖಂಡರು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದರು.

ತಾ.ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು. ಹೂಗುಚ್ಚ ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು.

Related posts

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!