30.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

ಬೆಳ್ತಂಗಡಿ: ಟೆಂಪಲ್ ಆಫ್ ಮಾರ್ಷಲ್ ಆರ್ಟ್ಸ್ ಮತ್ತು ಒಕಿನಾವನ್ ಶೋಟೋಕನ್ ಕರಾಟೆ-ಡೋ ಇಂಟರ್ನ್ಯಾಷನಲ್ ಅವರ ಆಶ್ರಯದಲ್ಲಿ ನಡೆದ 4ನೇ ದಕ್ಷಿಣ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ – 2025 ಸ್ಪರ್ಧೆ, ನ.9ರಂದು ಜೆ.ಪಿ.ನಗರದ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಜೆ. ಪಿ ನಗರ, ಬೆಂಗಳೂರು ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸ್ಪರ್ಧೆಯಲ್ಲಿ ಜೆ.ಪಿ.ನಗರದ ಯಲೆಚೆನಹಳ್ಳಿಯ ಸನ್ ಜ್ಯುಪಿಟರ್ ಇಂಟರ್‌ನ್ಯಾಷನಲ್ ಶಾಲೆಯ 3ನೇ ತರಗತಿ ವಿದ್ಯಾರ್ಥಿಗಳು ಎ. ವಿಭಾಷ್ ವಿನಯಚಂದ್ರ ಮತ್ತು ಎ. ವಿಭಾ ವಿನಯಚಂದ್ರ (ಹಳದಿ ಬೆಲ್ಟ್, ಕಿರಿಯ ವಿಭಾಗ) ಅವರು ಭಾಗವಹಿಸಿ, ತಲಾ ಎರಡು ಟ್ರೋಫಿಗಳನ್ನು ಗೆದ್ದು ತಮ್ಮ ಅಪಾರ ಪ್ರತಿಭೆ ಮತ್ತು ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿದರು.

ಮಿತ್ತಬಾಗಿಲು ಗ್ರಾಮದ ಆಚಾರಿಬೆಟ್ಟು ಮನೆಯ ಈ ಅವಳಿ ಮಕ್ಕಳು ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇವರ ಪೋಷಕರು ವಿನಯಚಂದ್ರ (ವಕೀಲರು, ಕರ್ನಾಟಕ ಹೈಕೋರ್ಟ್) ಮತ್ತು ಶ್ರೀಮತಿ ಅಮಿತಾ. ಈ ಇಬ್ಬರ ಅದ್ಭುತ ಪ್ರದರ್ಶನವು ಸ್ಪರ್ಧೆಯ ಪ್ರಮುಖ ಆಕರ್ಷಣೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಇವರ ತರಬೇತಿದಾರರಾದ ರಾಜೇಂದ್ರ ಬಾಬು ಮತ್ತು ಗೀತಾ ಅವರು ಮಾರ್ಗದರ್ಶನ ನೀಡಿದರು.

Related posts

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya
error: Content is protected !!