July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

ಬೆಳ್ತಂಗಡಿ: ಟೆಂಪಲ್ ಆಫ್ ಮಾರ್ಷಲ್ ಆರ್ಟ್ಸ್ ಮತ್ತು ಒಕಿನಾವನ್ ಶೋಟೋಕನ್ ಕರಾಟೆ-ಡೋ ಇಂಟರ್ನ್ಯಾಷನಲ್ ಅವರ ಆಶ್ರಯದಲ್ಲಿ ನಡೆದ 4ನೇ ದಕ್ಷಿಣ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ – 2025 ಸ್ಪರ್ಧೆ, ನ.9ರಂದು ಜೆ.ಪಿ.ನಗರದ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಜೆ. ಪಿ ನಗರ, ಬೆಂಗಳೂರು ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸ್ಪರ್ಧೆಯಲ್ಲಿ ಜೆ.ಪಿ.ನಗರದ ಯಲೆಚೆನಹಳ್ಳಿಯ ಸನ್ ಜ್ಯುಪಿಟರ್ ಇಂಟರ್‌ನ್ಯಾಷನಲ್ ಶಾಲೆಯ 3ನೇ ತರಗತಿ ವಿದ್ಯಾರ್ಥಿಗಳು ಎ. ವಿಭಾಷ್ ವಿನಯಚಂದ್ರ ಮತ್ತು ಎ. ವಿಭಾ ವಿನಯಚಂದ್ರ (ಹಳದಿ ಬೆಲ್ಟ್, ಕಿರಿಯ ವಿಭಾಗ) ಅವರು ಭಾಗವಹಿಸಿ, ತಲಾ ಎರಡು ಟ್ರೋಫಿಗಳನ್ನು ಗೆದ್ದು ತಮ್ಮ ಅಪಾರ ಪ್ರತಿಭೆ ಮತ್ತು ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿದರು.

ಮಿತ್ತಬಾಗಿಲು ಗ್ರಾಮದ ಆಚಾರಿಬೆಟ್ಟು ಮನೆಯ ಈ ಅವಳಿ ಮಕ್ಕಳು ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇವರ ಪೋಷಕರು ವಿನಯಚಂದ್ರ (ವಕೀಲರು, ಕರ್ನಾಟಕ ಹೈಕೋರ್ಟ್) ಮತ್ತು ಶ್ರೀಮತಿ ಅಮಿತಾ. ಈ ಇಬ್ಬರ ಅದ್ಭುತ ಪ್ರದರ್ಶನವು ಸ್ಪರ್ಧೆಯ ಪ್ರಮುಖ ಆಕರ್ಷಣೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಇವರ ತರಬೇತಿದಾರರಾದ ರಾಜೇಂದ್ರ ಬಾಬು ಮತ್ತು ಗೀತಾ ಅವರು ಮಾರ್ಗದರ್ಶನ ನೀಡಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya
error: Content is protected !!