22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya
error: Content is protected !!