July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!