July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

ಹೊಸಪಟ್ಣ; ಸಾಮಾಜಿಕ ಸೇವೆಯಲ್ಲಿ ಮುಂಚೂಣಿ ಯಲ್ಲಿರುವ ಬಂಟ್ವಾಳ ತಾಲೂಕು ಪಿಲಾತ್ತಬೆಟ್ಟು ಗ್ರಾಮಾದ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿ.) ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ನೂರಾರು ಸಾಮಾಜಿಕ ಸೇವೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಯಾರೂ ಊಹಿಸದ ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸಿರುವುದು ಜಿಲ್ಲಾ ಪ್ರಶಸ್ತಿ ಬರಲು ಕಾರಣವಾಗಿದೆ. ಇದನ್ನು ಮನಗಂಡು ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ, ಹೊಸಪಟ್ಣ ಹಾಗೂ ಜಂಟಿ ಸಂಸ್ಥೆಗಳಾದ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ಸತ್ಯನಾರಾಯಣ ಭಜನಾ ಮಂಡಳಿ, ಹೊಸಪಟ್ಣ ಇದರ ಸರ್ವ ಸದಸ್ಯರು ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ ಸಾಧನೆಯನ್ನು ಅಭಿನಂದಿಸಿ ನ. 09 ರಂದು ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ಇವರಿಗೆ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಶ್ರೀಮತಿ ಶಾರದಾ – ಗ್ರಾಮ ಪಂಚಾಯತ್ ಅಧ್ಯಕ್ಷರು ಪಿಲಾತಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಲಕ್ಷ್ಮಿ ನಾರಾಯಣ ಹೆಗಡೆ , ಶ್ರೀಮತಿ ಪುಷ್ಪಲತಾ ಮೋಹನ್ ಸಾಲಿಯನ್, ಶ್ರೀಮತಿ ಲೀಲಾವತಿ ಶೆಟ್ಟಿ, ಶ್ರೀರಾಮ ಭಜನಾ ಮಂದಿರ ನೈನಾಡು ಇದರ ಗೌರವಾಧ್ಯಕ್ಷ ಜಾರಪ್ಪ ಪೂಜಾರಿ, ಶ್ರೀರಾಮ ಯುವಕ ಸಂಘದ ಗಣೇಶ್ ಹೆಗ್ಡೆ,
ಗೆಳೆಯರ ಬಳಗ ಸಂಸ್ಥೆಯ ಸಂಚಾಲಕರು ಎಲಿಯಸ್ ಕ್ರಾಸ್ತ , ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಅಧ್ಯಕ್ಷರು ಪ್ರವೀಣ್ ಕುಮಾರ್ ಜಾರಿಗೆದಡಿ, ಗೌರವಾಧ್ಯಕ್ಷ ಪದ್ಮನಾಭ ರೈ, ಬ್ರಾಣಿಗೇರಿ, ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ಸತೀಶ್ ನಾಯರ್ಮೇರು ಮುಂತಾದವರು ಇದ್ದರು.

ಶ್ರೀ ಸತ್ಯನಾರಾಯಣ ಪೂಜಾ ಸೇವಾ‌ ಸಮಿತಿಯ ಕಾರ್ಯದರ್ಶಿ ಭಾಸ್ಕರ್ ಪೂಜಾರಿ ನಾಯರ್ಮೇರು ಸಂಸ್ಥೆಯ ಹುಟ್ಟು-ಕಾರ್ಯವೈಖರಿಯ ಬಗ್ಗೆ ಪ್ರಾಸ್ತಾವಿಕಗೈದರು.
ಸಮಿತಿಯ ಪ್ರಧಾನ ಸಂಚಾಲಕ ಗಣೇಶ ಪೂಜಾರಿ ಸನ್ಮಾನಪತ್ರ ವಾಚಿಸಿದರು. ಪ್ರದೀಪ್ ಪಿಂಟೊ ಸದಸ್ಯರು ಗೆಳೆಯರ ಬಳಗ ಕಾರ್ಯ ನಿರ್ವಹಿಸಿದರು. ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಕ್ರಾಸ್ತ ವಂದಿಸಿದರು.

Related posts

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!