March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಚರ್ಚ್ ತೊಡಂಬಿಲ, ಚರ್ಚ್‌ನ ಧರ್ಮಗುರುಗಳಾದ ವಂದನೀಯ ಅಂತೋನಿ ಲೋಬೊರವರ ಮಾರ್ಗದರ್ಶನದಲ್ಲಿ, ಕಾರ್ಮಿಕ, ಪರಿಸರ ಮತ್ತು ಅಂತರ್ಧರ್ಮೀಯ ಆಯೋಗಗಳ ಸಂಯುಕ್ತ ಪೋಷಕತ್ವದಲ್ಲಿ, “ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” ಎಂಬ ಪರಿಕಲ್ಪನೆಯಡಿ ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲಿನ ಅಸಹಾಯಕರಿಗೆ ಸುಮಾರು ರೂ. 2 ಲಕ್ಷ ಮೌಲ್ಯದ ನಿತ್ಯೋಪಯೋಗಿ ವಸ್ತುಗಳನ್ನು ಸಂಗ್ರಹಿಸಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ರವರಿಗೆ ಹಸ್ತಾಂತರಿಸಲಾಯಿತು.

ಈ ಉತ್ತಮ ಸೇವಾ ಚಟುವಟಿಕೆಯನ್ನು ಶ್ಲಾಘಿಸಿದ ಡಾ. ಯು.ಸಿ. ಪೌಲೋಸ್ ರವರು ಮಾತನಾಡಿ, “ ಅಸಹಾಯಕರಿಗೆ ಹೃದಯಗಳ ಬಾಂಧವ್ಯತೆ ನಿರ್ಮಿಸಲು ಇದು ದಾನಭಾವನೆಯ ಸುಂದರ ನಿದರ್ಶನ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿ ಸದಸ್ಯರು, ವಿವಿಧ ಆಯೋಗ ಸದಸ್ಯರು ಹಾಗೂ ಚರ್ಚ್‌ನ ಭಕ್ತಜನರು ಉಪಸ್ಥಿತರಿದ್ದರು.

Related posts

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya
error: Content is protected !!