ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಬರೆಂಗಾಯದ ಸರಕಾರಿ ಉನ್ನತೀಕರಿಸಿದ ಹಿರಿಯಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ನಿಡ್ಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ಯಾಮಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು “ರಾಷ್ಟೀಯ ಸೇವಾ ಯೋಜನೆಯು ದೇಶ ಸೇವೆಯಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತದೆ. ಶಿಬಿರಾರ್ಥಿಗಳು ಶಿಬಿರದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಉತ್ತಮ ಸ್ವಯಂ ಸೇವಕರಾಗಲು ಸಾಧ್ಯ” ಎoದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ “ಎನ್ಎಸ್ ಎಸ್ ಮೂಲಕ ವ್ಯಕ್ತಿಯ ಸಂಪೂರ್ಣವಾದ ಬೆಳವಣಿಗೆ ಆಗುತ್ತದೆ. ಗ್ರಾಮಗಳ ಅಭಿವೃದ್ಧಿ ಎನ್ ಎಸ್ ಎಸ್ ನ ಮೂಲ ಉದ್ದೇಶ. ಜೊತೆಗೆ ದೇಶದಲ್ಲಿ ಬಹುದೊಡ್ಡ ಯುವ ಶಕ್ತಿಯನ್ನು ನಿರ್ಮಾಣ ಮಾಡಲು ಸಾಧ್ಯವಾಗುತದೆ” ಎಂದು ಹೇಳಿದರು.

ನಿಡ್ಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಎಸ್ ಡಿ ಎಮ್ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ನಶಾ ಮುಕ್ತ ಭಾರತ ಕುರಿತ ಕರ ಪತ್ರವನ್ನು ಬಿಡುಗಡೆಗೊಳಿಸಿದರು.
ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯರಾದ ಶೈಲಜಾ, ನಿಸರ್ಗ ಯುವಜನೇತರ ಮಂಡಲದ ಗೌರವ ಅಧ್ಯಕ್ಷರಾದ ನವೀನ್ ಕುಮಾರ್ ಗಾoತ್ರoಡ, ಬೆರoಗಾಯ ಶಾಲೆಯ ಮುಖ್ಯ ಶಿಕ್ಷಕರಾದ ಗೋಪಾಲ್, ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿ ಸಹಯೋಜನಾಧಿಕಾರಿ ಶೋಭಾ ವಂದಿಸಿದರು.ಸ್ವಯಂ ಸೇವಕಿ ಧನ್ಯ ನಿರೂಪಿಸಿದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!