23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸವನ್ನು ಕಾಲೇಜಿನಲ್ಲಿ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಏಕತಾ ದಿವಸದ ಮಹತ್ವ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಬಿಎ ಶಮಿವುಲ್ಲಾ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹ ಕಾರ್ಯಕ್ರಮ ಅಧಿಕಾರಿಗಳಾದ ಸತೀಶ್ ಧನ್ಯವಾದಗೈದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕ ಆಶಿಕ್ ದ್ವಿತೀಯ ಬಿಕಾಂ ರಾಷ್ಟ್ರೀಯ ಏಕತಾ ಜಾತವನ್ನು ಏರ್ಪಡಿಸಿದರು. ಕಾಲೇಜಿನಿಂದ ಬೆಳ್ತಂಗಡಿ ಪೇಟೆಯವರಿಗೆ ರಾಷ್ಟ್ರೀಯ ಏಕತಾ ಜಾಥವನ್ನು ನಡೆಸಲಾಯಿತು. ಎಲ್ಲ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya
error: Content is protected !!