22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

ಬೆಳ್ತಂಗಡಿ: ಮಾಲಾಡಿಯಲ್ಲಿ ಮನೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದ ಘಟನೆ ನ.9ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ನಿವಾಸಿ ಪ್ರಕಾಶ್‌ ಶೆಟ್ಟಿ (53) ಎಂಬವರ ದೂರಿನಂತೆ, ಸದ್ರಿಯವರ ಮನೆಯ ಸಮೀಪ ಶ್ರೀಮತಿ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಶೆಟ್ಟಿರವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ನ.9 ರಂದು ಬೆಳಿಗ್ಗೆ, ಪ್ರೇಮಾರವರ ಮಗಳು ಪ್ರಕಾಶ ಶೆಟ್ಟಿ ರವರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ ವ್ಯಕ್ತಿ ಕಳ್ಳತನಕ್ಕೆ ಬಂದಿರುವಂತೆ ಸಿ.ಸಿ ಟಿ.ವಿಯಲ್ಲಿ ಕಾಣುತ್ತಿರುವುದಾಗಿ ತಿಳಿಸಿರುತ್ತಾರೆ. ತಕ್ಷಣ ಪ್ರಕಾಶ್‌ ಶೆಟ್ಟಿ ಪ್ರೇಮರವರ ಮನೆಯ ಬಳಿ ತೆರಳಿ ನೋಡಿದಾಗ, ಪ್ರೇಮಾರವರ ಮನೆಯ ಮೇಲ್ಚಾವಣಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯು ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ನಿಂತುಕೊಂಡಿದ್ದು, ಪ್ರಕಾಶ್‌ ಶೆಟ್ಟಿ ರವರನ್ನು ನೋಡಿ ಕೆಳಗೆ ಹಾರಿ ಓಡಿ ತಪ್ಪಿಸಲು ಪ್ರಯತ್ನಿಸಿರುತ್ತಾನೆ.

ಈ ವೇಳೆ ಪ್ರಕಾಶ್‌ ಶೆಟ್ಟಿ ರವರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಅಪರಿಚಿತ ವ್ಯಕ್ತಿಯು ಆತನ ಕೈಯಲ್ಲಿದ್ದ ರಾಡಿನಿಂದ ಹಲ್ಲೆ ನಡೆಸಿರುತ್ತಾನೆ. ಬಳಿಕ ಸ್ಥಳೀಯ ನಿವಾಸಿಗಳ ಸಹಾಯದಿಂದ ಅಪರಿಚಿತ ವ್ಯಕ್ತಿಯನ್ನು ಹಿಡಿಯಲಾಗಿರುತ್ತದೆ. ಆತನ ಬಗ್ಗೆ ವಿಚಾರಿಸಲಾಗಿ ಆತನು ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ ಎಂಬುದಾಗಿ ತಿಳಿಸಿದ್ದು, ನಂತರ ಆತನನ್ನು ಪುಂಜಾಲಕಟ್ಟೆ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿರುತ್ತದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2025, ಕಲಂ: 331(1) 62 118(1) 307 BNS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು
ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿರುತ್ತದೆ.

Related posts

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!