September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

ಬೆಳ್ತಂಗಡಿ: ಮಾಲಾಡಿಯಲ್ಲಿ ಮನೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದ ಘಟನೆ ನ.9ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ನಿವಾಸಿ ಪ್ರಕಾಶ್‌ ಶೆಟ್ಟಿ (53) ಎಂಬವರ ದೂರಿನಂತೆ, ಸದ್ರಿಯವರ ಮನೆಯ ಸಮೀಪ ಶ್ರೀಮತಿ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಶೆಟ್ಟಿರವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ನ.9 ರಂದು ಬೆಳಿಗ್ಗೆ, ಪ್ರೇಮಾರವರ ಮಗಳು ಪ್ರಕಾಶ ಶೆಟ್ಟಿ ರವರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ ವ್ಯಕ್ತಿ ಕಳ್ಳತನಕ್ಕೆ ಬಂದಿರುವಂತೆ ಸಿ.ಸಿ ಟಿ.ವಿಯಲ್ಲಿ ಕಾಣುತ್ತಿರುವುದಾಗಿ ತಿಳಿಸಿರುತ್ತಾರೆ. ತಕ್ಷಣ ಪ್ರಕಾಶ್‌ ಶೆಟ್ಟಿ ಪ್ರೇಮರವರ ಮನೆಯ ಬಳಿ ತೆರಳಿ ನೋಡಿದಾಗ, ಪ್ರೇಮಾರವರ ಮನೆಯ ಮೇಲ್ಚಾವಣಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯು ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ನಿಂತುಕೊಂಡಿದ್ದು, ಪ್ರಕಾಶ್‌ ಶೆಟ್ಟಿ ರವರನ್ನು ನೋಡಿ ಕೆಳಗೆ ಹಾರಿ ಓಡಿ ತಪ್ಪಿಸಲು ಪ್ರಯತ್ನಿಸಿರುತ್ತಾನೆ.

ಈ ವೇಳೆ ಪ್ರಕಾಶ್‌ ಶೆಟ್ಟಿ ರವರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಅಪರಿಚಿತ ವ್ಯಕ್ತಿಯು ಆತನ ಕೈಯಲ್ಲಿದ್ದ ರಾಡಿನಿಂದ ಹಲ್ಲೆ ನಡೆಸಿರುತ್ತಾನೆ. ಬಳಿಕ ಸ್ಥಳೀಯ ನಿವಾಸಿಗಳ ಸಹಾಯದಿಂದ ಅಪರಿಚಿತ ವ್ಯಕ್ತಿಯನ್ನು ಹಿಡಿಯಲಾಗಿರುತ್ತದೆ. ಆತನ ಬಗ್ಗೆ ವಿಚಾರಿಸಲಾಗಿ ಆತನು ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ ಎಂಬುದಾಗಿ ತಿಳಿಸಿದ್ದು, ನಂತರ ಆತನನ್ನು ಪುಂಜಾಲಕಟ್ಟೆ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿರುತ್ತದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2025, ಕಲಂ: 331(1) 62 118(1) 307 BNS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು
ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿರುತ್ತದೆ.

Related posts

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya
error: Content is protected !!