22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

ಬೆಳ್ತಂಗಡಿ: ಟೆಂಪಲ್ ಆಫ್ ಮಾರ್ಷಲ್ ಆರ್ಟ್ಸ್ ಮತ್ತು ಒಕಿನಾವನ್ ಶೋಟೋಕನ್ ಕರಾಟೆ-ಡೋ ಇಂಟರ್ನ್ಯಾಷನಲ್ ಅವರ ಆಶ್ರಯದಲ್ಲಿ ನಡೆದ 4ನೇ ದಕ್ಷಿಣ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ – 2025 ಸ್ಪರ್ಧೆ, ನ.9ರಂದು ಜೆ.ಪಿ.ನಗರದ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಜೆ. ಪಿ ನಗರ, ಬೆಂಗಳೂರು ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸ್ಪರ್ಧೆಯಲ್ಲಿ ಜೆ.ಪಿ.ನಗರದ ಯಲೆಚೆನಹಳ್ಳಿಯ ಸನ್ ಜ್ಯುಪಿಟರ್ ಇಂಟರ್‌ನ್ಯಾಷನಲ್ ಶಾಲೆಯ 3ನೇ ತರಗತಿ ವಿದ್ಯಾರ್ಥಿಗಳು ಎ. ವಿಭಾಷ್ ವಿನಯಚಂದ್ರ ಮತ್ತು ಎ. ವಿಭಾ ವಿನಯಚಂದ್ರ (ಹಳದಿ ಬೆಲ್ಟ್, ಕಿರಿಯ ವಿಭಾಗ) ಅವರು ಭಾಗವಹಿಸಿ, ತಲಾ ಎರಡು ಟ್ರೋಫಿಗಳನ್ನು ಗೆದ್ದು ತಮ್ಮ ಅಪಾರ ಪ್ರತಿಭೆ ಮತ್ತು ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿದರು.

ಮಿತ್ತಬಾಗಿಲು ಗ್ರಾಮದ ಆಚಾರಿಬೆಟ್ಟು ಮನೆಯ ಈ ಅವಳಿ ಮಕ್ಕಳು ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇವರ ಪೋಷಕರು ವಿನಯಚಂದ್ರ (ವಕೀಲರು, ಕರ್ನಾಟಕ ಹೈಕೋರ್ಟ್) ಮತ್ತು ಶ್ರೀಮತಿ ಅಮಿತಾ. ಈ ಇಬ್ಬರ ಅದ್ಭುತ ಪ್ರದರ್ಶನವು ಸ್ಪರ್ಧೆಯ ಪ್ರಮುಖ ಆಕರ್ಷಣೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಇವರ ತರಬೇತಿದಾರರಾದ ರಾಜೇಂದ್ರ ಬಾಬು ಮತ್ತು ಗೀತಾ ಅವರು ಮಾರ್ಗದರ್ಶನ ನೀಡಿದರು.

Related posts

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!