ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya
error: Content is protected !!