25.5 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!