25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya
error: Content is protected !!