26.2 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya
error: Content is protected !!