July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

ಮಡಂತ್ಯಾರು: 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವು ನ. 6 ಮತ್ತು 7ರಂದು ಗಾರ್ಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ, ಮಡಂತ್ಯಾರು ಇವರ ಸಹಯೋಗದಲ್ಲಿ ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ನಿಖಿಲ್, ಮನ್ವಿತ್ ರವರು ಪ್ರಥಮ ಸ್ಥಾನವನ್ನು ಪಡೆದು ಹಾಗೂ 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿಯಾದ ಫ್ಲಾಯ್ಡ್ ಮಿಸ್ಕಿತ್ ಮತ್ತು ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾದ ವಿಶ್ಮಿತ ಪ್ರಭುರವರು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಬಾಲಕರ ರಿಲೆ ಸ್ಪರ್ಧೆಯಲ್ಲಿ 10ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ , ಫಾಯಿಝ್, ಆರನ್ ಸ್ಮಿತ್, ರೋಯಲ್ ಮೊರಸ್ ರವರು ದ್ವಿತೀಯ ಸ್ಥಾನವನ್ನು ಮತ್ತು 14ರ ವಯೋಮಾನದ ಬಾಲಕರ ವಿಭಾಗದಲ್ಲಿ ೮ನೇ ತರಗತಿಯ ವರ್ಣಿತ್ ರವರು ಮತ್ತು 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಮಿಥುನ್ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!