25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸವನ್ನು ಕಾಲೇಜಿನಲ್ಲಿ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಏಕತಾ ದಿವಸದ ಮಹತ್ವ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಬಿಎ ಶಮಿವುಲ್ಲಾ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹ ಕಾರ್ಯಕ್ರಮ ಅಧಿಕಾರಿಗಳಾದ ಸತೀಶ್ ಧನ್ಯವಾದಗೈದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕ ಆಶಿಕ್ ದ್ವಿತೀಯ ಬಿಕಾಂ ರಾಷ್ಟ್ರೀಯ ಏಕತಾ ಜಾತವನ್ನು ಏರ್ಪಡಿಸಿದರು. ಕಾಲೇಜಿನಿಂದ ಬೆಳ್ತಂಗಡಿ ಪೇಟೆಯವರಿಗೆ ರಾಷ್ಟ್ರೀಯ ಏಕತಾ ಜಾಥವನ್ನು ನಡೆಸಲಾಯಿತು. ಎಲ್ಲ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya
error: Content is protected !!