23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇನ್ನಿತರ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ದ.ಕ.ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭ ನ.14 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ನ.10ರಂದು ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಸಿಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ, ನಿರ್ದೆಶಕರಾದ ಗಣೇಶ್ ಮೂಲ್ಯ ಅನಿಲಡೆ, ಮಹಾಬಲ ಕೆ, ಧನಲಕ್ಷ್ಮೀ ಚಂದ್ರಶೇಖರ್, ಅಮಿತ ಪ್ರಿಯಾ ಲೋಬೊ ಹಾಗೂ ಮಹೇಶ್ ಕೋಟ್ಯಾನ್ ಜೆಂಕ್ಯಾರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya
error: Content is protected !!