September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

ಬೆಳ್ತಂಗಡಿ: ಟೆಂಪಲ್ ಆಫ್ ಮಾರ್ಷಲ್ ಆರ್ಟ್ಸ್ ಮತ್ತು ಒಕಿನಾವನ್ ಶೋಟೋಕನ್ ಕರಾಟೆ-ಡೋ ಇಂಟರ್ನ್ಯಾಷನಲ್ ಅವರ ಆಶ್ರಯದಲ್ಲಿ ನಡೆದ 4ನೇ ದಕ್ಷಿಣ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ – 2025 ಸ್ಪರ್ಧೆ, ನ.9ರಂದು ಜೆ.ಪಿ.ನಗರದ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಜೆ. ಪಿ ನಗರ, ಬೆಂಗಳೂರು ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸ್ಪರ್ಧೆಯಲ್ಲಿ ಜೆ.ಪಿ.ನಗರದ ಯಲೆಚೆನಹಳ್ಳಿಯ ಸನ್ ಜ್ಯುಪಿಟರ್ ಇಂಟರ್‌ನ್ಯಾಷನಲ್ ಶಾಲೆಯ 3ನೇ ತರಗತಿ ವಿದ್ಯಾರ್ಥಿಗಳು ಎ. ವಿಭಾಷ್ ವಿನಯಚಂದ್ರ ಮತ್ತು ಎ. ವಿಭಾ ವಿನಯಚಂದ್ರ (ಹಳದಿ ಬೆಲ್ಟ್, ಕಿರಿಯ ವಿಭಾಗ) ಅವರು ಭಾಗವಹಿಸಿ, ತಲಾ ಎರಡು ಟ್ರೋಫಿಗಳನ್ನು ಗೆದ್ದು ತಮ್ಮ ಅಪಾರ ಪ್ರತಿಭೆ ಮತ್ತು ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿದರು.

ಮಿತ್ತಬಾಗಿಲು ಗ್ರಾಮದ ಆಚಾರಿಬೆಟ್ಟು ಮನೆಯ ಈ ಅವಳಿ ಮಕ್ಕಳು ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇವರ ಪೋಷಕರು ವಿನಯಚಂದ್ರ (ವಕೀಲರು, ಕರ್ನಾಟಕ ಹೈಕೋರ್ಟ್) ಮತ್ತು ಶ್ರೀಮತಿ ಅಮಿತಾ. ಈ ಇಬ್ಬರ ಅದ್ಭುತ ಪ್ರದರ್ಶನವು ಸ್ಪರ್ಧೆಯ ಪ್ರಮುಖ ಆಕರ್ಷಣೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಇವರ ತರಬೇತಿದಾರರಾದ ರಾಜೇಂದ್ರ ಬಾಬು ಮತ್ತು ಗೀತಾ ಅವರು ಮಾರ್ಗದರ್ಶನ ನೀಡಿದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya
error: Content is protected !!