23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

ಬೆಳ್ತಂಗಡಿ: ಟೆಂಪಲ್ ಆಫ್ ಮಾರ್ಷಲ್ ಆರ್ಟ್ಸ್ ಮತ್ತು ಒಕಿನಾವನ್ ಶೋಟೋಕನ್ ಕರಾಟೆ-ಡೋ ಇಂಟರ್ನ್ಯಾಷನಲ್ ಅವರ ಆಶ್ರಯದಲ್ಲಿ ನಡೆದ 4ನೇ ದಕ್ಷಿಣ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ – 2025 ಸ್ಪರ್ಧೆ, ನ.9ರಂದು ಜೆ.ಪಿ.ನಗರದ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಜೆ. ಪಿ ನಗರ, ಬೆಂಗಳೂರು ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸ್ಪರ್ಧೆಯಲ್ಲಿ ಜೆ.ಪಿ.ನಗರದ ಯಲೆಚೆನಹಳ್ಳಿಯ ಸನ್ ಜ್ಯುಪಿಟರ್ ಇಂಟರ್‌ನ್ಯಾಷನಲ್ ಶಾಲೆಯ 3ನೇ ತರಗತಿ ವಿದ್ಯಾರ್ಥಿಗಳು ಎ. ವಿಭಾಷ್ ವಿನಯಚಂದ್ರ ಮತ್ತು ಎ. ವಿಭಾ ವಿನಯಚಂದ್ರ (ಹಳದಿ ಬೆಲ್ಟ್, ಕಿರಿಯ ವಿಭಾಗ) ಅವರು ಭಾಗವಹಿಸಿ, ತಲಾ ಎರಡು ಟ್ರೋಫಿಗಳನ್ನು ಗೆದ್ದು ತಮ್ಮ ಅಪಾರ ಪ್ರತಿಭೆ ಮತ್ತು ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿದರು.

ಮಿತ್ತಬಾಗಿಲು ಗ್ರಾಮದ ಆಚಾರಿಬೆಟ್ಟು ಮನೆಯ ಈ ಅವಳಿ ಮಕ್ಕಳು ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇವರ ಪೋಷಕರು ವಿನಯಚಂದ್ರ (ವಕೀಲರು, ಕರ್ನಾಟಕ ಹೈಕೋರ್ಟ್) ಮತ್ತು ಶ್ರೀಮತಿ ಅಮಿತಾ. ಈ ಇಬ್ಬರ ಅದ್ಭುತ ಪ್ರದರ್ಶನವು ಸ್ಪರ್ಧೆಯ ಪ್ರಮುಖ ಆಕರ್ಷಣೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಇವರ ತರಬೇತಿದಾರರಾದ ರಾಜೇಂದ್ರ ಬಾಬು ಮತ್ತು ಗೀತಾ ಅವರು ಮಾರ್ಗದರ್ಶನ ನೀಡಿದರು.

Related posts

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya
error: Content is protected !!