ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya
error: Content is protected !!