25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya
error: Content is protected !!