25.5 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ”ಮಿನಿ ಒಲಿಂಪಿಕ್“ ಹದಿನಾಲ್ಕು ವರ್ಷ ಕೆಳಗಿನ ವಯೋಮಿತಿಯ ಪಂದ್ಯಾ ಕೂಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ನಾಯಕತ್ವದ ದಕ್ಷಿಣ ಕನ್ನಡ ವಾಲಿಬಾಲ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

ನ 5 ರಿಂದ 7 ರ ವರೆಗೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ “ಮಿನಿ ಒಲಿಂಪಿಕ್ “ಕ್ರೀಡಾಕೂಟದಲ್ಲಿ ರಾಜ್ಯದ ಎಂಟು ಪ್ರತಿಷ್ಠಿತ ತಂಡಗಳಾದ ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಹಾಸನ, ಕಲಬುರ್ಗಿ,ಉತ್ತರ ಕನ್ನಡ, ಕೋಲಾರ, ಬಳ್ಳಾರಿ ತಂಡಗಳನ್ನು ಒಳಗೊಂಡ ಲೀಗ್ ಮಾದರಿಯ ಪಂದ್ಯಾ ಕೂಟದಲ್ಲಿ ದಕ್ಷಿಣ ಕನ್ನಡ ತಂಡವು ಫೈನಲ್ ನ ಜಿದ್ದಾಜಿದ್ದಿನ ಐದು ಸೆಟ್ಟಿನ ಪಂದ್ಯದಲ್ಲಿ ಸತತ ಮೂರು ಸೆಟ್ಟನ್ನು ಗೆಲ್ಲುವ ಮೂಲಕ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿಯನ್ನು ತನ್ನದಾಗಿಸಿಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದೆ.

ತಂಡದ ಮುಖ್ಯ ಕೋಚ್ ಆಗಿ ನೆಲ್ಯಾಡಿಯ ಬೆಥನಿ ಶಾಲೆಯ ದೈಹಿಕ ಶಿಕ್ಷಕರಾದ ಮನೋಜ್ ರವರು ಕಾರ್ಯ ನಿರ್ವಹಿಸಿದರು ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರೀಯ ಆಟಗಾರ ಲಕ್ಷ್ಮೀನಾರಾಯಣ, ಜಾಗಿರ್ದಾರ್, ಬಸವರಾಜ ಮುಂಡಗೋಳ, ವಾಲಿಬಾಲ್ ಅಸೋಸಿಯೇಷನ್ ನ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ,ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya
error: Content is protected !!