23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ವಿಜ್ಞಾನ ಸಂಘ ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ಇವುಗಳ ಸಹಭಾಗಿತ್ವದಲ್ಲಿ ಒಂದು ದಿನದ ಗಣಿತಶಾಸ್ತ್ರ ಕಾರ್ಯಾಗಾರ ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ, ಇದರ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮ ವಿಜೇತ್ ವಹಿಸಿದ್ದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ರೋಟರಿ ಕ್ಲಬ್ ಇದರ ಅಧ್ಯಕ್ಷರು, ಉಜಿರೆ ಎಸ್.ಡಿ.ಎಮ್ ಕಾಲೇಜಿನ ನಿವೃತ್ತ ಗಣಿತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊಫೆಸರ್ ಪ್ರಕಾಶ್ ಪ್ರಭು ಆಗಮಿಸಿ ವಿದ್ಯಾರ್ಥಿಗಳಿಗೆ ಗಣಿತಶಾಸ್ತ್ರವನ್ನು ಹೇಗೆ ಅಧ್ಯಯನ ಮಾಡಬೇಕು, ಹೇಗೆ ಲೆಕ್ಕಗಳನ್ನು ಬಿಡಿಸಬೇಕು, ಕಠಿಣತೆಯಿಂದ ಸರಳತೆಗೆ ಗಣಿತವನ್ನು ತರುವ ಕೆಲವೊಂದು ತಂತ್ರಗಳನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು.

ವಿದ್ಯಾರ್ಥಿಗಳಿಂದ ರಚಿತವಾದ ವಿಜ್ಞಾನ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಸುಕೇಶ್ ಕುಮಾರ್, ಉಪ ಪ್ರಾಂಶುಪಾಲರಾದ ಶ್ರೀ ಬಿ.ಎ.ಶಮಿಉಲ್ಲಾ, ಪದವಿ ವಿಭಾಗದ ಪ್ರಾಚಾರ್ಯರಾದ ಡಾ. ಸವಿತಾ ಉಪಸ್ಥಿತರಿದ್ದರು. ವಿಜ್ಞಾನ ಸಂಘದ ಸಂಯೋಜಕರಾದ ಶ್ರೀಮತಿ ಮಾಯಾ ಭಟ್ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಕುಮಾರಿ ಭಾಗ್ಯಶ್ರೀ ಅತಿಥಿಗಳನ್ನು ಪರಿಚಯಿಸಿದರು, ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಸೌಜನ್ಯ ಧನ್ಯವಾದವಿತ್ತರು. ಬೌತಶಾಸ್ತ್ರದ ಉಪನ್ಯಾಸಕಿ ಅನನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya
error: Content is protected !!