July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

ಹೊಸಪಟ್ಣ; ಸಾಮಾಜಿಕ ಸೇವೆಯಲ್ಲಿ ಮುಂಚೂಣಿ ಯಲ್ಲಿರುವ ಬಂಟ್ವಾಳ ತಾಲೂಕು ಪಿಲಾತ್ತಬೆಟ್ಟು ಗ್ರಾಮಾದ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿ.) ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ನೂರಾರು ಸಾಮಾಜಿಕ ಸೇವೆಗಳನ್ನು ನಡೆಸಿಕೊಂಡು ಬಂದಿರುವ ಈ ಸಂಸ್ಥೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಯಾರೂ ಊಹಿಸದ ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸಿರುವುದು ಜಿಲ್ಲಾ ಪ್ರಶಸ್ತಿ ಬರಲು ಕಾರಣವಾಗಿದೆ. ಇದನ್ನು ಮನಗಂಡು ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ, ಹೊಸಪಟ್ಣ ಹಾಗೂ ಜಂಟಿ ಸಂಸ್ಥೆಗಳಾದ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ಸತ್ಯನಾರಾಯಣ ಭಜನಾ ಮಂಡಳಿ, ಹೊಸಪಟ್ಣ ಇದರ ಸರ್ವ ಸದಸ್ಯರು ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ ಸಾಧನೆಯನ್ನು ಅಭಿನಂದಿಸಿ ನ. 09 ರಂದು ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ಇವರಿಗೆ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಶ್ರೀಮತಿ ಶಾರದಾ – ಗ್ರಾಮ ಪಂಚಾಯತ್ ಅಧ್ಯಕ್ಷರು ಪಿಲಾತಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಲಕ್ಷ್ಮಿ ನಾರಾಯಣ ಹೆಗಡೆ , ಶ್ರೀಮತಿ ಪುಷ್ಪಲತಾ ಮೋಹನ್ ಸಾಲಿಯನ್, ಶ್ರೀಮತಿ ಲೀಲಾವತಿ ಶೆಟ್ಟಿ, ಶ್ರೀರಾಮ ಭಜನಾ ಮಂದಿರ ನೈನಾಡು ಇದರ ಗೌರವಾಧ್ಯಕ್ಷ ಜಾರಪ್ಪ ಪೂಜಾರಿ, ಶ್ರೀರಾಮ ಯುವಕ ಸಂಘದ ಗಣೇಶ್ ಹೆಗ್ಡೆ,
ಗೆಳೆಯರ ಬಳಗ ಸಂಸ್ಥೆಯ ಸಂಚಾಲಕರು ಎಲಿಯಸ್ ಕ್ರಾಸ್ತ , ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಅಧ್ಯಕ್ಷರು ಪ್ರವೀಣ್ ಕುಮಾರ್ ಜಾರಿಗೆದಡಿ, ಗೌರವಾಧ್ಯಕ್ಷ ಪದ್ಮನಾಭ ರೈ, ಬ್ರಾಣಿಗೇರಿ, ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ಸತೀಶ್ ನಾಯರ್ಮೇರು ಮುಂತಾದವರು ಇದ್ದರು.

ಶ್ರೀ ಸತ್ಯನಾರಾಯಣ ಪೂಜಾ ಸೇವಾ‌ ಸಮಿತಿಯ ಕಾರ್ಯದರ್ಶಿ ಭಾಸ್ಕರ್ ಪೂಜಾರಿ ನಾಯರ್ಮೇರು ಸಂಸ್ಥೆಯ ಹುಟ್ಟು-ಕಾರ್ಯವೈಖರಿಯ ಬಗ್ಗೆ ಪ್ರಾಸ್ತಾವಿಕಗೈದರು.
ಸಮಿತಿಯ ಪ್ರಧಾನ ಸಂಚಾಲಕ ಗಣೇಶ ಪೂಜಾರಿ ಸನ್ಮಾನಪತ್ರ ವಾಚಿಸಿದರು. ಪ್ರದೀಪ್ ಪಿಂಟೊ ಸದಸ್ಯರು ಗೆಳೆಯರ ಬಳಗ ಕಾರ್ಯ ನಿರ್ವಹಿಸಿದರು. ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಕ್ರಾಸ್ತ ವಂದಿಸಿದರು.

Related posts

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya
error: Content is protected !!