25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ನ.10 ರಂದು “ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳು” ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಎಸ್ ಡಿ ಎಂ ಶಿಕ್ಷಣಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು  ಆಯೋಜಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ವಹಿಸಿದರು.

ಮುಖ್ಯ ಅತಿಥಿಗಳಾಗಿ ನೀಲಯ್ಯ ಗೌಡ, ಉಸ್ಮಾನ್ ಭಾಗವಹಿಸಿದ್ದರು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಅಗ್ನಿ ಅವಘಡದ ಸಮಯದಲ್ಲಿ ಶಾಂತವಾಗಿ ಮತ್ತು ಸುರಕ್ಷಿತವಾಗಿ ವರ್ತಿಸುವ ನೈಪುಣ್ಯವನ್ನು ಬೆಳೆಸುವುದಾಗಿತ್ತು.

ಕಾರ್ಯಕ್ರಮವನ್ನು ಸ್ಥಳೀಯ ಅಗ್ನಿಶಾಮಕ ದಳದ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು. ಪ್ರಾರಂಭದಲ್ಲಿ ಅಗ್ನಿಶಾಮಕ ಅಧಿಕಾರಿ ಉಸ್ಮಾನ್ ಅಗ್ನಿ ಸಂಭವಿಸುವ ಕಾರಣಗಳು, ಅಗ್ನಿಯ ವಿಧಗಳು ಹಾಗೂ ಅದರ ನಿಯಂತ್ರಣ ವಿಧಾನಗಳ ಬಗ್ಗೆ ವಿವರಿಸಿದರು. ಅವರು ಗ್ಯಾಸ್ ಲೀಕ್ ಆಗುವಾಗ ತೆಗೆದುಕೊಳ್ಳಬೇಕಾದ ಕ್ರಮಗಳು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗುವ ಬೆಂಕಿಯನ್ನು ಹೇಗೆ ನಂದಿಸಬೇಕು ಎಂಬುದರ ಕುರಿತು ಸ್ಪಷ್ಟವಾದ ಮಾಹಿತಿ ನೀಡಿದರು.

ನಂತರ ಪ್ರಾಯೋಗಿಕ ಪ್ರದರ್ಶನ (ಪ್ರಾತ್ಯಕ್ಷಿಕೆ) ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ಉಪಕರಣಗಳನ್ನು ಹೇಗೆ ಬಳಸಿ ಬೆಂಕಿ ನಂದಿಸಬಹುದು ಎಂಬುದನ್ನು ತೋರಿಸಲಾಯಿತು. ಕೆಲವು ವಿದ್ಯಾರ್ಥಿಗಳಿಗೆ ಸಹ ಭಾಗವಹಿಸುವ ಅವಕಾಶ ನೀಡಲಾಗಿತ್ತು. ಪ್ರಶಿಕ್ಷಣಾರ್ಥಿ ವಾಹಿನಿ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ನೀದು ಕಾರ್ಯಕ್ರಮ ನಿರೂಪಿಸಿ, ಅಖಿಲ ಧನ್ಯವಾದಗಳನ್ನು ಅರ್ಪಿಸಿದರು.

Related posts

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya
error: Content is protected !!