25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

ಬೆಳ್ತಂಗಡಿ:  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್‌ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರಿನ ರಾಜಾಜಿನಗರ ನಿವಾಸಿ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಎಸ್ ರಾಜಶೇಖರ್ ವಾದಿಸಿದರು.

ಗಿರೀಶ್ ಮಟ್ಟಣ್ಣನವರ್ ಹೇಳಿಕೆ ವಿರುದ್ಧ 2025ರ ಆಗಸ್ಟ್ 29ರಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದ ಕಾವೇರಿ ಕೇದಾರನಾಥ ನೇತೃತ್ವದ ನಿಯೋಗ ಮಟ್ಟಣ್ಣನವರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ದೂರಿನ ಸಂಬಂಧ ಮಹಿಳಾ ಆಯೋಗದಿಂದ ಈವರೆಗೆ ಯಾವುದೇ ಕ್ರಮ ಆಗದ ಕಾರಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಅರ್ಜಿದಾರರು ಸಲ್ಲಿಸಿರುವ ದೂರು ಆಧರಿಸಿ ಗಿರೀಶ್ ಮಟ್ಟಣ್ಣನವರ್ ವಿರುದ್ದ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ನ್ಯಾಯಾಲಯ ಮಹಿಳಾ ಆಯೋಗಕ್ಕೆ ನಿರ್ದೇಶನ ನೀಡಿದೆ

Related posts

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya
error: Content is protected !!