25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

ಉಜಿರೆ: ಶ್ರೀ ಧ.ಮ. ಶಿಕ್ಷಣ ಸಂಸ್ಥೆ , ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಮಂಗಳೂರಿನ ಶಕ್ತಿ ನಗರದಲ್ಲಿರುವ ದಕ್ಷಿಣ ಕನ್ನಡ ಫಿಲೇಟೆಲಿ ಮತ್ತು ನ್ಯೂಮಿಸ್ಮ್ಯಾಟಿಕ್ ಅಸೋಸಿಯೇಷನ್ (DKPANA)ಇವರು ಜಂಟಿಯಾಗಿ ನ.15 ರಂದು ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ವಸ್ತು ಪ್ರದರ್ಶನದಲ್ಲಿ, ಹಳೇ ನಾಣ್ಯಗಳು, ಸ್ಟಾಂ ಗಳು, ಅನೇಕ ಪುರಾತನ ವಸ್ತುಗಳು, ಅವುಗಳ ಜತೆಗೆ ರಾಜರ್ಷಿ ವೀರೇಂದ್ರ ಹೆಗ್ಗಡೆಯವರ ಸಂಗ್ರಹದ ಕೆಲವು ವಸ್ತುಗಳ ಪ್ರದರ್ಶನ ನಡೆಯಲಿದೆ. ವಿದ್ಯಾರ್ಥಿಗಳಿಗೆ ಅತೀ ಉಪಯುಕ್ತ ಮಾಹಿತಿ ಸಿಗಲಿರುವ ಈ ವಸ್ತು ಪ್ರದರ್ಶನ, ಆ ದಿನ ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯ ವರೇಗೆ ನಡೆಯಲಿರುವುದು.
ಶ್ರೀ ಧ.ಮ. ಎಜುಕೇಷನಲ್ ಸೊಸೈಟಿಯ ಐಟಿ ವಿಭಾಗದ ಸಿ. ಇ.ಓ ಪೂರಣ್ ವರ್ಮರವರು ವಸ್ತು ಪ್ರದರ್ಶನದ ಉದ್ಘಾಟನೆ ಮಾಡಲಿರುವರು. ಮುಖ್ಯ ಅತಿಥಿಗಳಾಗಿ DKPANA ಅಧ್ಯಕ್ಷ ಮರ್ಕಡ್ ಪ್ರಭಾಕರ ಕಾಮತ್, ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು, ಕಾರ್ಯದರ್ಶಿ ರೊ. ಡಾ. ಎಂ.ಎಂ ದಯಾಕರ್ ಉಪಸ್ಥಿತರಿವರು.

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕೆಂದು ಕಾರ್ಯಕ್ರಮದ ಸಂಚಾಲಕಿ ಡಾ. ವಿದ್ಯಾ ಶ್ರೀಹರಿಯವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya
error: Content is protected !!