24 C
ಪುತ್ತೂರು, ಬೆಳ್ತಂಗಡಿ
June 21, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

ಬಳಂಜ: ಬಳಂಜ ವಾಲಿವಾಲ್ ಕ್ಲಬ್ ಸಹಕಾರದೊಂದಿಗೆ,ಕೋಟ್ಯಾನ್ ರಾಕರ್ಸ್ ತಂಡದ ವತಿಯಿಂದ ನ. 8 ರಂದು ನಡೆದ ವಾಲಿಬಾಲ್ ಪಂದ್ಯಾಕೂಟದ ಉದ್ಘಾಟನೆಯನ್ನು ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೋಟ್ಯಾನ್ ರಾಕರ್ಸ್ ತಂಡದ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್, ಶರತ್ ಅಂಚನ್, ರಂಜಿತ್ ಮಜಲಡ್ಡ, ಪ್ರವೀಣ್ ಡಿ ಕೋಟ್ಯಾನ್, ದಿನೇಶ್ ನಿಟ್ಟಡ್ಕ, ಅಶ್ರಫ್, ಬಿವಿಎಲ್ ಕಾರ್ಯದರ್ಶಿ ಯೋಗೀಶ್ ಹಾಗೂ ತಂಡದ ಆಟಗಾರರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಲಿಬಾಲ್ ಪಂದ್ಯಾವಳಿಯಲ್ಲಿ ಕೋಟ್ಯಾನ್ ರಾಕರ್ಸ್ ತಂಡವು ಸೀಸನ್ 6 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇಕೋ ಪ್ರೇಶ್ ಎಂಟರ್ಪ್ರೈಸಸ್ ತಂಡವು ರನ್ನರ್ ಆಗಿ ಹೊರಹೊಮ್ಮಿತು.

ವಿಜೇತ ತಂಡದಲ್ಲಿ ಸುರೇಶ್ ಪೂಜಾರಿ ಹೇವ, ಪುರಂದರ ಪೂಜಾರಿ, ನಿಶಾಂತ್, ರಂಜಿತ್ ಪೂಂಜಬೆಟ್ಟು,ಪ್ರವೀಣ್ ಗಾಂದೋಟ್ಟು, ಭಾಸ್ಕರ ಶೆಟ್ಟಿ, ಅನ್ವಿತ್ ಹೇವ, ರಾಜೇಶ್ ಯೈಕುರಿ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಸಾದ್ ವೀಕ್ಷಣಾ ವಿವರಣಾ ಮಾಡಿದರು. ಕೇವನ್ ಹಾಗೂ ತಂಡದವರು ತೀರ್ಪುಗಾರಿಕೆಯಲ್ಲಿ ಸಹಕರಿಸಿದರು.

Related posts

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya
error: Content is protected !!