24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾರವರು ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ.

ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಕೂಡಾ ಸುಮಾರು ರೂ. 70,000 ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್ ಪೂಂಜಾರವರ ಮನೆಯಲ್ಲಿ ಸಾಂಕೇತಿಕವಾಗಿ ತಾಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯಾ ಬಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣನಂದ ರಾವ್, ದ.ಕ. ಜಿಲ್ಲೆಯ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಗೌಡ, ಬೆಳ್ತಂಗಡಿ ತಾಲೂಕು ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ, ಬೆಳ್ತಂಗಡಿ ತಾಲೂಕು ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಖಿಲ್ ಕುಮಾರ್, ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಪದಾಧಿಕಾರಿ ಅಜಿತ್ ಕುಮಾರ್ ಹಾಗೂ ಹಲವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya
error: Content is protected !!