26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾರವರು ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ.

ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಕೂಡಾ ಸುಮಾರು ರೂ. 70,000 ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್ ಪೂಂಜಾರವರ ಮನೆಯಲ್ಲಿ ಸಾಂಕೇತಿಕವಾಗಿ ತಾಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯಾ ಬಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣನಂದ ರಾವ್, ದ.ಕ. ಜಿಲ್ಲೆಯ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಗೌಡ, ಬೆಳ್ತಂಗಡಿ ತಾಲೂಕು ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ, ಬೆಳ್ತಂಗಡಿ ತಾಲೂಕು ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಖಿಲ್ ಕುಮಾರ್, ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಪದಾಧಿಕಾರಿ ಅಜಿತ್ ಕುಮಾರ್ ಹಾಗೂ ಹಲವರು ಉಪಸ್ಥಿತರಿದ್ದರು.

Related posts

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya
error: Content is protected !!