24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾರವರು ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ.

ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಕೂಡಾ ಸುಮಾರು ರೂ. 70,000 ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್ ಪೂಂಜಾರವರ ಮನೆಯಲ್ಲಿ ಸಾಂಕೇತಿಕವಾಗಿ ತಾಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯಾ ಬಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣನಂದ ರಾವ್, ದ.ಕ. ಜಿಲ್ಲೆಯ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಗೌಡ, ಬೆಳ್ತಂಗಡಿ ತಾಲೂಕು ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ, ಬೆಳ್ತಂಗಡಿ ತಾಲೂಕು ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಖಿಲ್ ಕುಮಾರ್, ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಪದಾಧಿಕಾರಿ ಅಜಿತ್ ಕುಮಾರ್ ಹಾಗೂ ಹಲವರು ಉಪಸ್ಥಿತರಿದ್ದರು.

Related posts

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
error: Content is protected !!