24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರ ವಿಷಯವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಹಿಂದಿನ ಸರಕಾರಗಳು ರಬ್ಬರು ಕೃಷಿಗೆ ನೀಡಿದ ಪ್ರೋತ್ಸಾಹದಿಂದ ನಮ್ಮ ರಾಜ್ಯದಲ್ಲಿಯೂ ಕೃಷಿಕ ಬೆಳೆಗಾರರು ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಯಾಗಿ ರಬ್ಬರು ಕೃಷಿಯಲ್ಲಿ ತೊಡಗಿಕೊಂಡಿರುತ್ತಾರೆ. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ವಿವರಿಸಲಾಯಿತು. ಅಂತೆಯೇ ರಬ್ಬರು ಆಮದು ಸುಂಕವನ್ನು ಹೆಚ್ಚಿಸಿ ದೇಶೀಯ ರಬ್ಬರು ಉತ್ಪಾದನೆಗೆ ಹೆಚ್ಚಿನ ಬೇಡಿಕೆ ಬರುವಂತೆ ಮತ್ತು ರಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿಪಡಿಸುವಂತೆ ಸರಕಾರವನ್ನು ಬೆಳೆಗಾರರ ಪರವಾಗಿ ಒತ್ತಾಯಿಸಲು ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ಅಧ್ಯಕ್ಷ ಶ್ರೀಧರ ಜಿ ಭಿಡೆ, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿ ರಾಜು ಶೆಟ್ಟಿ, ಬೆಳ್ತಂಗಡಿ ರಬ್ಬರ್ ಸೊಸೈಟಿ ನಿರ್ದೇಶಕ ಶಾಜಿ ಪಿ ಎ ಉಪಸ್ಥಿತರಿದ್ದರು.

Related posts

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya
error: Content is protected !!