28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ನ.10 ರಂದು “ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳು” ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಎಸ್ ಡಿ ಎಂ ಶಿಕ್ಷಣಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು  ಆಯೋಜಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ವಹಿಸಿದರು.

ಮುಖ್ಯ ಅತಿಥಿಗಳಾಗಿ ನೀಲಯ್ಯ ಗೌಡ, ಉಸ್ಮಾನ್ ಭಾಗವಹಿಸಿದ್ದರು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಅಗ್ನಿ ಅವಘಡದ ಸಮಯದಲ್ಲಿ ಶಾಂತವಾಗಿ ಮತ್ತು ಸುರಕ್ಷಿತವಾಗಿ ವರ್ತಿಸುವ ನೈಪುಣ್ಯವನ್ನು ಬೆಳೆಸುವುದಾಗಿತ್ತು.

ಕಾರ್ಯಕ್ರಮವನ್ನು ಸ್ಥಳೀಯ ಅಗ್ನಿಶಾಮಕ ದಳದ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು. ಪ್ರಾರಂಭದಲ್ಲಿ ಅಗ್ನಿಶಾಮಕ ಅಧಿಕಾರಿ ಉಸ್ಮಾನ್ ಅಗ್ನಿ ಸಂಭವಿಸುವ ಕಾರಣಗಳು, ಅಗ್ನಿಯ ವಿಧಗಳು ಹಾಗೂ ಅದರ ನಿಯಂತ್ರಣ ವಿಧಾನಗಳ ಬಗ್ಗೆ ವಿವರಿಸಿದರು. ಅವರು ಗ್ಯಾಸ್ ಲೀಕ್ ಆಗುವಾಗ ತೆಗೆದುಕೊಳ್ಳಬೇಕಾದ ಕ್ರಮಗಳು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗುವ ಬೆಂಕಿಯನ್ನು ಹೇಗೆ ನಂದಿಸಬೇಕು ಎಂಬುದರ ಕುರಿತು ಸ್ಪಷ್ಟವಾದ ಮಾಹಿತಿ ನೀಡಿದರು.

ನಂತರ ಪ್ರಾಯೋಗಿಕ ಪ್ರದರ್ಶನ (ಪ್ರಾತ್ಯಕ್ಷಿಕೆ) ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ಉಪಕರಣಗಳನ್ನು ಹೇಗೆ ಬಳಸಿ ಬೆಂಕಿ ನಂದಿಸಬಹುದು ಎಂಬುದನ್ನು ತೋರಿಸಲಾಯಿತು. ಕೆಲವು ವಿದ್ಯಾರ್ಥಿಗಳಿಗೆ ಸಹ ಭಾಗವಹಿಸುವ ಅವಕಾಶ ನೀಡಲಾಗಿತ್ತು. ಪ್ರಶಿಕ್ಷಣಾರ್ಥಿ ವಾಹಿನಿ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ನೀದು ಕಾರ್ಯಕ್ರಮ ನಿರೂಪಿಸಿ, ಅಖಿಲ ಧನ್ಯವಾದಗಳನ್ನು ಅರ್ಪಿಸಿದರು.

Related posts

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಮಡಂತ್ಯಾರು ವರ್ತಕ ಬಂಧು ಸಹಕಾರಿ ಸಂಘದ ಮಹಾಸಭೆ: ಶೇ.12 ಡಿವಿಡೆಂಟ್ ಘೋಷಣೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya
error: Content is protected !!