25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ನ.10 ರಂದು “ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳು” ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಎಸ್ ಡಿ ಎಂ ಶಿಕ್ಷಣಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು  ಆಯೋಜಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ವಹಿಸಿದರು.

ಮುಖ್ಯ ಅತಿಥಿಗಳಾಗಿ ನೀಲಯ್ಯ ಗೌಡ, ಉಸ್ಮಾನ್ ಭಾಗವಹಿಸಿದ್ದರು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಅಗ್ನಿ ಅವಘಡದ ಸಮಯದಲ್ಲಿ ಶಾಂತವಾಗಿ ಮತ್ತು ಸುರಕ್ಷಿತವಾಗಿ ವರ್ತಿಸುವ ನೈಪುಣ್ಯವನ್ನು ಬೆಳೆಸುವುದಾಗಿತ್ತು.

ಕಾರ್ಯಕ್ರಮವನ್ನು ಸ್ಥಳೀಯ ಅಗ್ನಿಶಾಮಕ ದಳದ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು. ಪ್ರಾರಂಭದಲ್ಲಿ ಅಗ್ನಿಶಾಮಕ ಅಧಿಕಾರಿ ಉಸ್ಮಾನ್ ಅಗ್ನಿ ಸಂಭವಿಸುವ ಕಾರಣಗಳು, ಅಗ್ನಿಯ ವಿಧಗಳು ಹಾಗೂ ಅದರ ನಿಯಂತ್ರಣ ವಿಧಾನಗಳ ಬಗ್ಗೆ ವಿವರಿಸಿದರು. ಅವರು ಗ್ಯಾಸ್ ಲೀಕ್ ಆಗುವಾಗ ತೆಗೆದುಕೊಳ್ಳಬೇಕಾದ ಕ್ರಮಗಳು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗುವ ಬೆಂಕಿಯನ್ನು ಹೇಗೆ ನಂದಿಸಬೇಕು ಎಂಬುದರ ಕುರಿತು ಸ್ಪಷ್ಟವಾದ ಮಾಹಿತಿ ನೀಡಿದರು.

ನಂತರ ಪ್ರಾಯೋಗಿಕ ಪ್ರದರ್ಶನ (ಪ್ರಾತ್ಯಕ್ಷಿಕೆ) ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ಉಪಕರಣಗಳನ್ನು ಹೇಗೆ ಬಳಸಿ ಬೆಂಕಿ ನಂದಿಸಬಹುದು ಎಂಬುದನ್ನು ತೋರಿಸಲಾಯಿತು. ಕೆಲವು ವಿದ್ಯಾರ್ಥಿಗಳಿಗೆ ಸಹ ಭಾಗವಹಿಸುವ ಅವಕಾಶ ನೀಡಲಾಗಿತ್ತು. ಪ್ರಶಿಕ್ಷಣಾರ್ಥಿ ವಾಹಿನಿ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ನೀದು ಕಾರ್ಯಕ್ರಮ ನಿರೂಪಿಸಿ, ಅಖಿಲ ಧನ್ಯವಾದಗಳನ್ನು ಅರ್ಪಿಸಿದರು.

Related posts

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya
error: Content is protected !!