28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

ಬೆಳ್ತಂಗಡಿ: ಸೇವಾಭಾರತಿ ಸಂಸ್ಥೆಯು ಕನ್ಯಾಡಿಯ ಸುಪ್ರಜ ಸಭಾಂಗಣ ಮತ್ತು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನ. 9 ರಂದು ಆಯೋಜಿಸಿದಂತಹ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಗಣ್ಯರನ್ನು ಒಗ್ಗೂಡಿಸಿ ಇವರೆಗೆ ನಡೆದು ಬಂದಂತಹ ದಾರಿಗಳು ಮತ್ತು ಸಂಸ್ಥೆಯ ಸೇವಾಕಾರ್ಯಗಳ ವಿಸ್ತಾರಗಳ ಬಗ್ಗೆ ವರದಿಯನ್ನು ನೀಡಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಇದರ ವಿಸ್ತಾರದ ಬಗ್ಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಪಡೆಯಲಾಯಿತು.

ಡಾ. ಎಲ್ ಎಚ್ ಮಂಜುನಾಥ್, ಪುರಂದರ್ ರಾವ್, ಶ್ರೀಮತಿ ಮನೋರಮ ಭಟ್, ಶ್ರೀ ಭುಜಬಲಿ ಧರ್ಮಸ್ಥಳ ಸಹಿತ ಗಣ್ಯರು ಭಾಗವಹಿಸಿದ್ದರು. ಸಂಸ್ಥೆಯ ಬಗ್ಗೆ ಮತ್ತು ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವಿವರವನ್ನು ಕೆ ವಿನಾಯಕ ರಾವ್ ರವರು ಪ್ರಸ್ತಾಪಿಸಿದರು. ಸಂಸ್ಥೆಯ ಸೇವಾಕಾರ್ಯಗಳ ಬಗ್ಗೆ ಚರಣ್ ಕುಮಾರ್ ಎಂ ರವರು ವಿವರವಿತ್ತರು ಪಂಚಪರಿವರ್ತನೆಯ ಬಗ್ಗೆ ಚಂದ್ರಶೇಖರ್ ರವರು ತಿಳಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುವೆಟ್ಟು ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!