28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

ಬೆಳ್ತಂಗಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಇನ್ನಂಜೆಯಲ್ಲಿರುವ ಕೋಳ್ಯೂರು ಕಾಂಪೌಂಡ್ ನಲ್ಲಿ ಕೋಳ್ಯೂರು ರಾಮಚಂದ್ರ ರಾಯರ 94ನೇ ಜನುಮ ದಿನದ ಅಂಗವಾಗಿ ತಾಳಮದ್ದಳೆ ಪ್ರಸಂಗ: ಶರಸೇತು ಬಂಧನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ದಿವಾಕರ ಆಚಾರ್ಯ ಧರ್ಮಸ್ಥಳ, ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ವಾಸುದೇವ ಆಚಾರ್ಯ ಉಜಿರೆ, ರಂಜಿತ್ ಪಾಠ್ಕರ್ ಅಜೆಕಾರು ಸಹಕರಿಸಿದರು.
ಮುಮ್ಮೇಳದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಹನುಮಂತನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ವೃದ್ಧ ವಿಪ್ರನಾಗಿ ಶಶಿಧರ ಕನ್ಯಾಡಿ, ಶ್ರೀರಾಮನಾಗಿ ಕೋಳ್ಯೂರು ರಾಮಚಂದ್ರ ರಾಯರು ಪಾತ್ರ ನಿರ್ವಹಿಸಿದರು. ಯಕ್ಷಭಾರತಿಯ ಖಾಯಂ ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.
ತಂಡದ ಪ್ರತಿ ಸದಸ್ಯರನ್ನು ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಮನೆಯವರು ಗೌರವಿಸಿದರು.

ತನ್ನ ಅದ್ಭುತ ಪ್ರತಿಭಾ ಸಾಮರ್ಥ್ಯ, ಪರಿಶ್ರಮದಿಂದ ರಂಗಸ್ಥಳದ ಬೆಳಕಾಗಿ ಅಚ್ಚಳಿಯದೇ ದಾಖಲಾದ ಶ್ರೀ ಕೋಳ್ಯೂರು ರಾಮಚಂದ್ರ ರಾಯರು ವೇಷಧಾರಿಯಾಗಿ, ಅರ್ಥಧಾರಿಯಾಗಿ ಸುಮಾರು ಏಳು ದಶಕದ ಸುದೀರ್ಘ ಅವಧಿಯಲ್ಲಿ ರಂಗದಲ್ಲಿ ಮೆರೆದ ಹಾಗೂ ಸ್ತ್ರೀ ವೇಷಗಳಿಗೆ ಮಾದರಿ ಸದೃಶರಾಗಿರುವ ಶ್ರೀಯುತರ 94 ನೇ ಜನುಮ ದಿನವನ್ನು ಮನೆಯವರು ಬಂಧು ಮಿತ್ರರೊಂದಿಗೆ ಸ್ವಗೃಹದಲ್ಲಿ ಆಚರಿಸಿಕೊಂಡರು. ಈ ಶುಭ ಸಂದರ್ಭದಲ್ಲಿ ಬಹುತೇಕ ಅವರ ಶಿಷ್ಯರೇ ಇರುವ ಯಕ್ಷಭಾರತಿ ತಂಡದಿಂದ ತಾಳಮದ್ದಳೆ ಪ್ರಸ್ತುತಿಯಾಗಿರುವುದು ಆಚರಣೆಗೆ ಮೆರುಗು ನೀಡಿತು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya
error: Content is protected !!