May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

ಬೆಳ್ತಂಗಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಇನ್ನಂಜೆಯಲ್ಲಿರುವ ಕೋಳ್ಯೂರು ಕಾಂಪೌಂಡ್ ನಲ್ಲಿ ಕೋಳ್ಯೂರು ರಾಮಚಂದ್ರ ರಾಯರ 94ನೇ ಜನುಮ ದಿನದ ಅಂಗವಾಗಿ ತಾಳಮದ್ದಳೆ ಪ್ರಸಂಗ: ಶರಸೇತು ಬಂಧನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ದಿವಾಕರ ಆಚಾರ್ಯ ಧರ್ಮಸ್ಥಳ, ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ವಾಸುದೇವ ಆಚಾರ್ಯ ಉಜಿರೆ, ರಂಜಿತ್ ಪಾಠ್ಕರ್ ಅಜೆಕಾರು ಸಹಕರಿಸಿದರು.
ಮುಮ್ಮೇಳದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಹನುಮಂತನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ವೃದ್ಧ ವಿಪ್ರನಾಗಿ ಶಶಿಧರ ಕನ್ಯಾಡಿ, ಶ್ರೀರಾಮನಾಗಿ ಕೋಳ್ಯೂರು ರಾಮಚಂದ್ರ ರಾಯರು ಪಾತ್ರ ನಿರ್ವಹಿಸಿದರು. ಯಕ್ಷಭಾರತಿಯ ಖಾಯಂ ಆಹ್ವಾನಿತ ಸದಸ್ಯರಾದ ಕಶ್ಯಪ್ ಕನ್ಯಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.
ತಂಡದ ಪ್ರತಿ ಸದಸ್ಯರನ್ನು ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಮನೆಯವರು ಗೌರವಿಸಿದರು.

ತನ್ನ ಅದ್ಭುತ ಪ್ರತಿಭಾ ಸಾಮರ್ಥ್ಯ, ಪರಿಶ್ರಮದಿಂದ ರಂಗಸ್ಥಳದ ಬೆಳಕಾಗಿ ಅಚ್ಚಳಿಯದೇ ದಾಖಲಾದ ಶ್ರೀ ಕೋಳ್ಯೂರು ರಾಮಚಂದ್ರ ರಾಯರು ವೇಷಧಾರಿಯಾಗಿ, ಅರ್ಥಧಾರಿಯಾಗಿ ಸುಮಾರು ಏಳು ದಶಕದ ಸುದೀರ್ಘ ಅವಧಿಯಲ್ಲಿ ರಂಗದಲ್ಲಿ ಮೆರೆದ ಹಾಗೂ ಸ್ತ್ರೀ ವೇಷಗಳಿಗೆ ಮಾದರಿ ಸದೃಶರಾಗಿರುವ ಶ್ರೀಯುತರ 94 ನೇ ಜನುಮ ದಿನವನ್ನು ಮನೆಯವರು ಬಂಧು ಮಿತ್ರರೊಂದಿಗೆ ಸ್ವಗೃಹದಲ್ಲಿ ಆಚರಿಸಿಕೊಂಡರು. ಈ ಶುಭ ಸಂದರ್ಭದಲ್ಲಿ ಬಹುತೇಕ ಅವರ ಶಿಷ್ಯರೇ ಇರುವ ಯಕ್ಷಭಾರತಿ ತಂಡದಿಂದ ತಾಳಮದ್ದಳೆ ಪ್ರಸ್ತುತಿಯಾಗಿರುವುದು ಆಚರಣೆಗೆ ಮೆರುಗು ನೀಡಿತು.

Related posts

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya
error: Content is protected !!