25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

ಉಜಿರೆ: ಶ್ರೀ ಧ.ಮ. ಶಿಕ್ಷಣ ಸಂಸ್ಥೆ , ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಮಂಗಳೂರಿನ ಶಕ್ತಿ ನಗರದಲ್ಲಿರುವ ದಕ್ಷಿಣ ಕನ್ನಡ ಫಿಲೇಟೆಲಿ ಮತ್ತು ನ್ಯೂಮಿಸ್ಮ್ಯಾಟಿಕ್ ಅಸೋಸಿಯೇಷನ್ (DKPANA)ಇವರು ಜಂಟಿಯಾಗಿ ನ.15 ರಂದು ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ವಸ್ತು ಪ್ರದರ್ಶನದಲ್ಲಿ, ಹಳೇ ನಾಣ್ಯಗಳು, ಸ್ಟಾಂ ಗಳು, ಅನೇಕ ಪುರಾತನ ವಸ್ತುಗಳು, ಅವುಗಳ ಜತೆಗೆ ರಾಜರ್ಷಿ ವೀರೇಂದ್ರ ಹೆಗ್ಗಡೆಯವರ ಸಂಗ್ರಹದ ಕೆಲವು ವಸ್ತುಗಳ ಪ್ರದರ್ಶನ ನಡೆಯಲಿದೆ. ವಿದ್ಯಾರ್ಥಿಗಳಿಗೆ ಅತೀ ಉಪಯುಕ್ತ ಮಾಹಿತಿ ಸಿಗಲಿರುವ ಈ ವಸ್ತು ಪ್ರದರ್ಶನ, ಆ ದಿನ ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯ ವರೇಗೆ ನಡೆಯಲಿರುವುದು.
ಶ್ರೀ ಧ.ಮ. ಎಜುಕೇಷನಲ್ ಸೊಸೈಟಿಯ ಐಟಿ ವಿಭಾಗದ ಸಿ. ಇ.ಓ ಪೂರಣ್ ವರ್ಮರವರು ವಸ್ತು ಪ್ರದರ್ಶನದ ಉದ್ಘಾಟನೆ ಮಾಡಲಿರುವರು. ಮುಖ್ಯ ಅತಿಥಿಗಳಾಗಿ DKPANA ಅಧ್ಯಕ್ಷ ಮರ್ಕಡ್ ಪ್ರಭಾಕರ ಕಾಮತ್, ರೋಟರಿ ಕ್ಲಬ್ ಅಧ್ಯಕ್ಷ ರೊ. ಪ್ರೊ. ಪ್ರಕಾಶ ಪ್ರಭು, ಕಾರ್ಯದರ್ಶಿ ರೊ. ಡಾ. ಎಂ.ಎಂ ದಯಾಕರ್ ಉಪಸ್ಥಿತರಿವರು.

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕೆಂದು ಕಾರ್ಯಕ್ರಮದ ಸಂಚಾಲಕಿ ಡಾ. ವಿದ್ಯಾ ಶ್ರೀಹರಿಯವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya
error: Content is protected !!