26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ, ಗೋ ವಧೆ ಕೇಸಿಗೆ ಸಂಬಂಧಪಡದ ಸಾರಮ್ಮ ಎಂಬವರ ಮನೆಯನ್ನು ತರಾತುರಿಯಲ್ಲಿ ಜಪ್ತಿ ಮಾಡಿ ಮಕ್ಕಳೂ ಸಹಿತ ಮನೆಯವರನ್ನು ಹೊರಹಾಕಿದ ಘಟನೆಯಲ್ಲಿ ತಪ್ಪಿತಸ್ಥ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಮುಖಂಡರು ಬೆಳ್ತಂಗಡಿ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

ನ.10 ರಂದು ಬೆಳ್ತಂಗಡಿ ಕಚೇರಿಯಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ಡಿವೈಎಸ್‌ಪಿ ಸಿ.ಕೆ ರೋಹಿಣಿ ಜೊತೆ ನಡೆದ ಮಾತುಕತೆಯಲ್ಲಿ ಕೆಲವು ವಿಚಾರಗಳನ್ನು ಅವರ ಗಮನಕ್ಕೆ ತಂದು ಮುಕ್ತವಾಗಿ ಚರ್ಚಿಸಲಾಯಿತು.

ಗೋವಧೆ ಕಾನೂನು ಉಲ್ಲಂಘನೆ ಹೆಸರಲ್ಲಿ ಒಂದು ಸಮುದಾಯವನ್ನು ಗುರಿಯಾಗಿಸಿ ಪೊಲೀಸರನ್ನು ಶುಕ್ರವಾರದ ಮಸೀದಿಯ ಪ್ರಾರ್ಥನೆಯ ಸಂದರ್ಭ ಕಳುಹಿಸಿ ಮಾಹಿತಿಯ ನೆಪದಲ್ಲಿ ಬೆದರಿಸುವಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಈ‌ ಬಗ್ಗೆ ಸಮುದಾಯಕ್ಕೆ ಇರುವ ಆಕ್ರೋಶವನ್ನು ನೂತನ ಡಿವೈಎಸ್‌ಪಿ ಅವರ ಗಮನಕ್ಕೆ ತರಲಾಯಿತು. ಹೊರತಾಗಿ ಪೊಲೀಸ್ ಇಲಾಖೆಗೆ ನಮ್ಮ ಸಹಕಾರ ಇರುವುದಾಗಿ ಭರವಸೆ ನೀಡಿದರು. ಇಡೀ ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಸಹಿತದ ಕಸಾಯಿ ಖಾನೆಗಳು ಇಲ್ಲದೇ ಇರುವುದರಿಂದ ಅಲ್ಲಲ್ಲಿ ಇಂತಹಾ ಅಕ್ರಮಗಳಿಗೆ ಎಡೆಯಾಗಿದೆ. ಈ‌ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಂಡು ತಾಲೂಕಿಗೊಂದು ಸಕ್ರಮ ಕಸಾಯಿಖಾನೆ ಮಂಜೂರುಗೊಳಿಸಬೇಕು.
ಅಲ್ಲಿ ನಿಯಮದ‌ ವ್ಯಾಪ್ತಿಯಲ್ಲಿ ವ್ಯವಹಾರ ನಡೆದರೆ ಯಾವುದೇ ಗೊಂದಲಗಳಿಗೆ ಅವಕಾಶವೇ ಇರುವುದಿಲ್ಲ ಎಂದು ಅಧಿಕಾರಿಗಳ ಗಮನಸೆಳೆಯಲಾಯಿತು.

ನಿಯೋಗದ ಒಟ್ಟು ವಿಚಾರಗಳ‌ ಬಗ್ಗೆ ಪ್ರತಿಕ್ರಿಯಿಸಿದ ಡಿವೈಎಸ್‌ಪಿ ಸಿ.ಕೆ ರೋಹಿಣಿ ಅವರು, ಈ ರೀತಿಯ ಪರಸ್ಪರ ಸಂವಹನ ಮಾರ್ಗದಿಂದ ಅನೇಕ ಸಮಸ್ಯೆಗಳು ಸಣ್ಣ ಮಟ್ಟದಲ್ಲೇ ಪರಿಹಾರವಾಗುತ್ತದೆ.
ನೀವು ಹೇಳಿರುವ ಅಂಶಗಳನ್ನು ಗಮನಿಸಿಕೊಂಡು ಕ್ರಮವಹಿಸಲಾಗುವುದು. ಕಾನೂನು ಸುವ್ಯವಸ್ಥೆಯ ದೃಷ್ಟಿಯಲ್ಲಿ ಒಳ್ಳೆಯ ಕೆಲಸ‌ಮಾಡಬೇಕು ಎಂಬ ಇರಾದೆಯಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ. ಎಲ್ಲರ ಸಹಕಾರ ಪಡೆದುಕೊಂಡು ಮುಂದುವರಿಯಲಾಗುವುದು ಎಂದರು.

ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್ ಅವರ ನೇತೃತ್ವದಲ್ಲಿ ನಡೆದ ಈ‌ ಮಾತುಕತೆಯಲ್ಲಿ ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಭಾಗವಹಿಸಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya
error: Content is protected !!