May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ಜ್ಞಾನ ನಿಲಯ ಬೆಳ್ತಂಗಡಿ ಇಲ್ಲಿ ನ.10 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನಿನಿ ರಾಜ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ವಹಿಸಿದ್ದರು. ಉದ್ಘಾಟನೆಯನ್ನು ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ. ಬಿನೋಯಿ ಎ.ಜೆ ನೆರವೇರಿಸಿದರು. ಕ್ರಾಸ್ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆಯ ಸಂಯೋಜಕ ರಾಜಶೇಖರ್ ರವರು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಸಂಪದ ಸಂಸ್ಥೆಯ ಸಂಯೋಜಕ ಸ್ಟ್ಯಾನ್ಲಿ ಫೆರ್ನಾಂಡಿಸ್ ರವರು ಲಿಂಗ ಸಮಾನತೆ ಬಗ್ಗೆ ತಿಳಿದುಕೊಂಡು ಕುಟುಂಬ ಮತ್ತು ಸಮುದಾಯದ ಬೆಳವಣಿಗೆಗೆ ಶ್ರಮಿಸಬೇಕು. ಬದಲಾವಣೆಗಳು ನಮ್ಮಿಂದ ಆಗಬೇಕು, ಮಕ್ಕಳನ್ನು ಗಂಡು ಮತ್ತು ಹೆಣ್ಣು ಎಂಬ ಭೇದವಿಲ್ಲದೆ ಸಮಾನವಾಗಿ ಬೆಳೆಸಬೇಕು, ಆಗ ಮಾತ್ರ ಘನತೆ ಮತ್ತು ಗೌರವದ ಜೀವನ ನಡೆಸಲು ಸಾಧ್ಯ ಎಂಬ ಬಗ್ಗೆ ತರಬೇತಿಯನ್ನು ನೀಡಿದರು. ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ಸ್ವಾಗತಿಸಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ವಂದಿಸಿದರು. ಯೋಜನಾ ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೋ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಲಿಂಗ ಸಮಾನತಾ ಪ್ರೇರಕ ತಂಡದ ಸದಸ್ಯರು ಹಾಗೂ ಮಹಾ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!