ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ನ 10 ರಂದು ಭೇಟಿ ನೀಡಿದರು.

ಸಿರಿ ಸಂಸ್ಥೆಯ ಪರವಾಗಿ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್ ಜನಾರ್ಧನ್ ಅವರು ನಟಿ ಶ್ರುತಿ ಅವರನ್ನು ಗೌರವಿಸಿದರು.ಬಳಿಕ ಮಾತನಾಡಿದ ಅವರು ಸಿರಿ ಸಂಸ್ಥೆಯು ಮನಸದಸಿಗೆ ಸಂತೋಷ ತರುವ ವಾತಾವರಣ ಸೃಷ್ಟಿಮಾಡಿದೆ. ಇಲ್ಲಿನ ಶಿಸ್ತು, ಸ್ಚಚ್ಚತೆ ಜೊತೆಗೆ ಡಾ.ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಖಾವಂದರ ದೂರದೃಷ್ಟಿ ಚಿಂತನೆ ಮತ್ತು ಅವರು ಸಮಾಜಕ್ಕೆ ನೀಡಿದ ಸೇವೆಗಳನ್ನು ನಾವೆಲ್ಲರೂ ಗೌರವಿಸಬೇಕಾಗಿದೆ ಎಂದರು.

ಸಿರಿ ಸಂಸ್ಥೆಯ ಎಂಡಿ ಕೆಎನ್ ಜನಾರ್ಧನ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಶ್ರುತಿ ಅವರ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸಿಇಓ ಪ್ರಸನ್ನ,ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.













