24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರ ವಿಷಯವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಹಿಂದಿನ ಸರಕಾರಗಳು ರಬ್ಬರು ಕೃಷಿಗೆ ನೀಡಿದ ಪ್ರೋತ್ಸಾಹದಿಂದ ನಮ್ಮ ರಾಜ್ಯದಲ್ಲಿಯೂ ಕೃಷಿಕ ಬೆಳೆಗಾರರು ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಯಾಗಿ ರಬ್ಬರು ಕೃಷಿಯಲ್ಲಿ ತೊಡಗಿಕೊಂಡಿರುತ್ತಾರೆ. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ವಿವರಿಸಲಾಯಿತು. ಅಂತೆಯೇ ರಬ್ಬರು ಆಮದು ಸುಂಕವನ್ನು ಹೆಚ್ಚಿಸಿ ದೇಶೀಯ ರಬ್ಬರು ಉತ್ಪಾದನೆಗೆ ಹೆಚ್ಚಿನ ಬೇಡಿಕೆ ಬರುವಂತೆ ಮತ್ತು ರಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿಪಡಿಸುವಂತೆ ಸರಕಾರವನ್ನು ಬೆಳೆಗಾರರ ಪರವಾಗಿ ಒತ್ತಾಯಿಸಲು ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ಅಧ್ಯಕ್ಷ ಶ್ರೀಧರ ಜಿ ಭಿಡೆ, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿ ರಾಜು ಶೆಟ್ಟಿ, ಬೆಳ್ತಂಗಡಿ ರಬ್ಬರ್ ಸೊಸೈಟಿ ನಿರ್ದೇಶಕ ಶಾಜಿ ಪಿ ಎ ಉಪಸ್ಥಿತರಿದ್ದರು.

Related posts

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya
error: Content is protected !!