July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

ಬೆಳ್ತಂಗಡಿ: ಶಿರಸಿಯಲ್ಲಿ ನ. 8 ಮತ್ತು 9ರಂದು ಇನ್ನರ್ ವೀಲ್ ಕ್ಲಬ್ ಆಯೋಜಿಸಿದ ಸಂಪ್ರೀತಿ ಕಾರ್ಯಕ್ರಮದಲ್ಲಿ, ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ ವಿವಿಧ ಕರಕುಶಲ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ದಿವ್ಯಾಂಗರು ಸ್ವಯಂ ತಯಾರಿಸಿದ ಬತ್ತಿಕಟ್ಟು, ಹೂಗಳು, ಉಣ್ಣೆಯ ವಸ್ತುಗಳು, ಗೊಂಬೆಗಳು ಸೇರಿದಂತೆ ಹಲವು ವಿಧದ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಿದರು.

ಈ ಮಳಿಗೆಯನ್ನು ಸೌಜನ್ಯ ತೆಲಂಗ ರವರ ನೇತೃತ್ವದಲ್ಲಿ, ಶ್ರೀ ಕೃಷ್ಣರವರ ಸಹಕಾರದೊಂದಿಗೆ ಪ್ರಥಮ ಬಾರಿಗೆ ಆಯೋಜಿಸಲಾಯಿತು. ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಮಳಿಗೆಯ ಸಂಪೂರ್ಣ ನಿರ್ವಹಣೆಯನ್ನು ದಿವ್ಯಾಂಗರೇ ಮಾಡಿರುವುದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ರೂ.19,000/- ಮೌಲ್ಯದ ವ್ಯಾಪಾರ ನಡೆದಿದ್ದು, ಇದು ಕಾರ್ಯಕ್ರಮದ ಯಶಸ್ಸಿನ ಮತ್ತು ದಿವ್ಯಾಂಗರ ಆತ್ಮವಿಶ್ವಾಸದ ಸ್ಪಷ್ಟ ಉದಾಹರಣೆಯಾಗಿದೆ.

Related posts

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!