25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

ಬೆಳ್ತಂಗಡಿ: ಶಿರಸಿಯಲ್ಲಿ ನ. 8 ಮತ್ತು 9ರಂದು ಇನ್ನರ್ ವೀಲ್ ಕ್ಲಬ್ ಆಯೋಜಿಸಿದ ಸಂಪ್ರೀತಿ ಕಾರ್ಯಕ್ರಮದಲ್ಲಿ, ಸೇವಾಧಾಮದಿಂದ ಪುನಶ್ಚೇತನಗೊಂಡ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ತಯಾರಿಸಿದ ವಿವಿಧ ಕರಕುಶಲ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ದಿವ್ಯಾಂಗರು ಸ್ವಯಂ ತಯಾರಿಸಿದ ಬತ್ತಿಕಟ್ಟು, ಹೂಗಳು, ಉಣ್ಣೆಯ ವಸ್ತುಗಳು, ಗೊಂಬೆಗಳು ಸೇರಿದಂತೆ ಹಲವು ವಿಧದ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಿದರು.

ಈ ಮಳಿಗೆಯನ್ನು ಸೌಜನ್ಯ ತೆಲಂಗ ರವರ ನೇತೃತ್ವದಲ್ಲಿ, ಶ್ರೀ ಕೃಷ್ಣರವರ ಸಹಕಾರದೊಂದಿಗೆ ಪ್ರಥಮ ಬಾರಿಗೆ ಆಯೋಜಿಸಲಾಯಿತು. ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಮಳಿಗೆಯ ಸಂಪೂರ್ಣ ನಿರ್ವಹಣೆಯನ್ನು ದಿವ್ಯಾಂಗರೇ ಮಾಡಿರುವುದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ರೂ.19,000/- ಮೌಲ್ಯದ ವ್ಯಾಪಾರ ನಡೆದಿದ್ದು, ಇದು ಕಾರ್ಯಕ್ರಮದ ಯಶಸ್ಸಿನ ಮತ್ತು ದಿವ್ಯಾಂಗರ ಆತ್ಮವಿಶ್ವಾಸದ ಸ್ಪಷ್ಟ ಉದಾಹರಣೆಯಾಗಿದೆ.

Related posts

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya
error: Content is protected !!