May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2026 ಜನವರಿ 16 ರಿಂದ 25 ರ ವರೆಗೆ ನಡೆಯಲಿದೆ.‌

ಖಾಝಿ ಶೈಖುನಾ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಅವರ ನೇತೃತ್ವದಲ್ಲಿ, ಸಯ್ಯಿದ್ ಕಾಜೂರು ತಂಙಳ್ ಮಾರ್ಗದರ್ಶನದೊಂದಿಗೆ ನಡೆಯುವ ಈ ಆಧ್ಯಾತ್ಮಿಕ ಅನುಭೂತಿಯ ಕಾರ್ಯಕ್ರಮಗಳ ಅಧಿಕೃತ ಘೋಷಣೆಯನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಗೌರವಾಧ್ಯಕ್ಷರೂ, ಸಮಸ್ತ ಕೇರಳ ಕೇಂದ್ರ ಮುಶಾವರ ಉಪಾಧ್ಯಕ್ಷ ಖುದುವತುಸ್ಸಾದಾತ್ ಅಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್
ಪ್ರಕಟಿಸಿ, ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಉರೂಸ್ ಕಾರ್ಯಕ್ರಮವು ಕಾಜೂರು ಮತ್ತು ಕಿಲ್ಲೂರು ಜಂಟಿ ಆಶ್ರಯದಲ್ಲಿ ಸಂಪ್ರದಾಯಬದ್ಧವಾಗಿ ಗತ ವೈಭವ ಮರುಕಳಿಸುವಂತೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಯ್ಯಿದ್ ಕುಂಬೋಳ್ ತಂಙಳ್ ತಿಳಿಸಿದರು.

ಪೋಸ್ಟರ್ ಬಿಡುಗಡೆ ಸಂದರ್ಭದಲ್ಲಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ಉರೂಸ್ ಸಮಿತಿ ಉಪಾಧ್ಯಕ್ಷ ಹಾಗೂ ಎಮ್.ಜೆ.ಎಮ್ ಕಿಲ್ಲೂರು ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ, ಉರೂಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ‌.ಎಚ್ ಅಬೂಬಕ್ಕರ್ ಸಿದ್ದೀಕ್, ಕಾಜೂರು ಆಡಳಿತ ಸಮಿತಿ ಉಪಾಧ್ಯಕ್ಷ ಮುಹಮ್ಮದ್ ಬಶೀರ್ ಅಹ್ಸನಿ, ಎಮ್.ಜೆ.ಎಮ್ ಕಿಲ್ಲೂರು ಮಸೀದಿ ಉಪಾಧ್ಯಕ್ಷ ಶಾಹುಲ್ ಹಮೀದ್, ಕಿಲ್ಲೂರು ಮಸೀದಿ ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆ, ಪ್ರಮುಖರಾದ ಮುಹಮ್ಮದ್ ಸಖಾಫಿ ಕಾಜೂರು, ಕೆ ಯು ಮುಹಮ್ಮದ್ ಹನೀಫ್ ಕಾಜೂರು, ಕೆ ಮುಹಮ್ಮದ್ ಕಿಲ್ಲೂರು, ಬದ್ರುದ್ದೀನ್ ಕಿಲ್ಲೂರ್ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!